Breaking News

ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ

Spread the love

ಬೆಂಗಳೂರು: ಕೆಜಿ ಹಳ್ಳಿ ಗಲಾಟೆಯಲ್ಲಿ ಮೃತರಾದ ಮೂವರ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ನೀಡುವದಾಗಿ ಘೋಷಣೆ ಮಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ನೀಡಿರುವ ಎಚ್ಚರದ ಸಂದೇಶಕ್ಕೆ ಜಮೀರ್ ಅಹ್ಮದ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದರು. ಆದರೆ ಅನಗತ್ಯ ಗಲಭೆ ಮಾಡಿದವರ ಕುಟುಂಬಕ್ಕೆ ಪರಿಹಾರ ಕೊಟ್ಟರೆ ಬೇರೆಯದೆ ಸಂದೇಶ ರವಾನೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ಕೊಡುವುದಾದರೆ ಕೊಡಿ. ಆದರೆ ಈ ವಿಷಯ ಮಾತ್ರ ಬಹಿರಂಗ ಆಗಬಾರದು ಎಂದು ಕಾಂಗ್ರೆಸ್ ನಾಯಕರು ಎಂದಿದ್ದಾರೆ. ಎಲ್ಲಿಯೂ ಸಹ ಪರಿಹಾರ ಕೊಟ್ಟೆ ಅಂತ ಹೇಳಬಾರದು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದು ವಾರ್ನ್ ಮಾಡಿದ್ದಾರೆ ಎನ್ನಲಾಗಿದೆ.

ಮುಸ್ಲಿಂ ಸಮುದಾಯದ ಪ್ರಶ್ನಾತೀತ ನಾಯಕ ನಾನೇ ಎಂದುಕೊಂಡ ಜಮೀರ್ ಗಲಭೆಯಲ್ಲಿ ಮೃತರಾದವರ ಕುಟುಂಬಕ್ಕೆ ಪರಿಹಾರ ಘೋಷಿಸಿದರು. ಪರಿಹಾರ ಕೊಟ್ಟರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ. ಪರಿಹಾರ ಕೊಟ್ಟರು ಕೊಟ್ಟೆ ಅಂತ ಹೇಳಿಕೊಳ್ಳುವಂತಿಲ್ಲ ಎಂಬ ಪಕ್ಷದ ನಾಯಕರ ವರಸೆ ಕಂಡು ಜಮೀರ್ ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಲುಕಿದಂತಾಗಿದ್ದಾರೆ. ಆಡಿದ ಮಾತಿನಂತೆ ಜಮೀರ್ ಪರಿಹಾರ ಕೊಡ್ತಾರಾ? ಅಥವಾ ಸೈಲೆಂಟ್ ಪರಿಹಾರಕ್ಕೆ ಒಪ್ಪದೆ ಸುಮ್ಮನಾಗ್ತಾರಾ ಅನ್ನೋದೆ ಸದ್ಯದ ಕುತೂಹಲ.

 

https://www.facebook.com/105350550949710/videos/1603268693183822/?sfnsn=wiwspmo&extid=61M2w0rsAgl3cU6X&d=n&vh=e

 


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ