Breaking News

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ  ಕಾನೂನು ರೀತಿಯಲ್ಲಿ ಅನುಮತಿ ನೀಡಿ,

Spread the love

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯಂದು, ಬೆಳಗಾವಿಯ ಪೀರನವಾಡಿಯಲ್ಲಿ ಅವರ ಪ್ರತಿಮೆ ತೆರವುಗೊಳಿಸಿರುವುದು ನಿಜಕ್ಕೂ ಕನ್ನಡಿಗರಿಗೆ ಆಗಿರುವ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ  ಕಾನೂನು ರೀತಿಯಲ್ಲಿ ಅನುಮತಿ ನೀಡಿ, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ  ಬೆಳಗಾವಿ ಜಿಲ್ಲಾಡಳಿತಕ್ಕೆ ಅವರು  ಮನವಿ ಮಾಡಿದ್ದಾರೆ.

ಆ. 15 ರಂದು ಬೆಳಗಿನ ಜಾವ ಕೆಲ ಯುವಕರು ಪೀರಣವಾಡಿಯ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪಿಸಿದ್ದರು. ಬಳಿಕ ಪೊಲೀಸ್ ಇಲಾಖೆ ಅದನ್ನು ತೆರವುಗೊಳಿಸಿ ವಶದಲ್ಲಿರಿಸಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ