ಮಂಗಳವಾರ ಹಾಲು ತುಪ್ಪ ಕಾರ್ಯ ಹಿನ್ನೆಲೆ, ಪುನೀತ್ ರಾಜ್ಕುಮಾರ್ ಸಮಾಧಿಗೆ, ಕೊಯಮತ್ತೂರನಿಂದ ತರಿಸಲಾದ ಹಲವಾರು ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ ಎಂದು ಡೆಕೋರೇಟರ್ ದರ್ಶನ್ ಹೇಳಿದರು. ಇಂದು ಬೆಳಗ್ಗೆ 9 ಗಂಟೆಗೆ ಹಾಲು ತುಪ್ಪ ಕಾರ್ಯ ಜರುಗಲಿದೆ. ಈ ಕಾರ್ಯಕ್ಕೆ ರಾಜ್ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಸ್ನೇಹಿತರು ಭಾಗಿಯಾಗಲಿದ್ದಾರೆ. ಸದ್ಯಕ್ಕೆ ಅಭಿಮಾನಿಗಳಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ತಿಳಿದುಬಂದಿದೆ.

ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ
ಪುನೀತ್ ಸಮಾಧಿಯ ಬಳಿ ಹಾಲು ತುಪ್ಪ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಮಾಧಿಗೆ ನಮಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಮಂಜುನಾಥ್ ಇಂದು ಹಾಲು ತುಪ್ಪ ಕಾರ್ಯಕ್ರಮ ಮುಗಿಯವರೆಗೂ ಅಭಿಮಾನಿಗಳಿಗೆ, ಇನ್ನೂ ಎರಡು ದಿನ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೂ ರಾಜ್ಕುಮಾರ್ ಸಮಾಧಿ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಹಾಗಾಗಿ ರಾಜ್ಕುಮಾರ್ ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.