Breaking News

ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ

Spread the love

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು.

ಸುಮಾರು 4 ಎಕರೆ ಪ್ರದೇಶದಲ್ಲಿ 54 ಲಕ್ಷ ರೂ. ವೆಚ್ಚದಲ್ಲಿ ಮಲ ಸಂಸ್ಕರಣ ಘಟಕ ನಿರ್ಮಾಣವಾಗುತ್ತಿದೆ. ಈ ಸಂಸ್ಕರಣ ಘಟಕದಲ್ಲಿ ಸಂಗ್ರಹವಾಗುವ ಮಲದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ರೈತರಿಗೆ ಪೂರೈಕೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ’ ಎಂದು ಶಾಸಕ ಐಹೊಳೆ ತಿಳಿಸಿದರು.

ಹೆಸ್ಕಾಂ ನಿರ್ದೇಶಕ ಮಹೇಶ್​​ ಭಾತೆ ಮಾತನಾಡಿ, ‘ಈ ಪ್ರದೇಶದಲ್ಲಿ ಸುಮಾರು ಒಂದು ಸಾವಿರ ಸಸಿ ನೆಡುವ ಮುಖಾಂತರ ಒಳ್ಳೆಯ ಪರಿಸರ ನಿರ್ಮಾಣ ಮಾಡುವ ಗುರಿಯೂ ಇದೆ’ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವಿತ್ರಿ ಜೇದೆ, ಉಪಾಧ್ಯಕ್ಷ ರಮೇಶ ಚೌಡನ್ನವರ, ಮಾಜಿ ಅಧ್ಯಕ್ಷ ಸಂಜಯ ಕಾಂಬಳೆ, ಸುರೇಶ ಕೇಸ್ತಿ, ಗ್ರಾ.ಪಂ ಸದಸ್ಯ ರಾಜು ಕೋಟಗಿ‌ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ