Breaking News

ದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದ ಹೈಕೋರ್ಟ್

Spread the love

ಬೆಂಗಳೂರು: ಸಂತ್ರಸ್ತರು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದು ಹೈಕೋರ್ಟ್ ಹೇಳಿದೆ.

ನಗರದ ವಿಶೇಷ ನ್ಯಾಯಾಲಯದಲ್ಲಿ ರಾಜಾಜಿನಗರದ ನಿವಾಸಿಯೊಬ್ಬರ ವಿರುದ್ಧ ನಡೆಯುತ್ತಿದ್ದ ವಿಚಾರಣೆ ರದ್ದುಗೊಳಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಪೀಠ, ಈ ಅಭಿಪ್ರಾಯಪಟ್ಟಿತು.

 

ತುಮಕೂರಿನ ವ್ಯಕ್ತಿಯೊಬ್ಬರು ನೀಡಿದ್ದ ದೂರು ಆಧರಿಸಿ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ(ಪಿಒಎ) ನಡೆಯುತ್ತಿದ್ದ ವಿಚಾರಣೆಯನ್ನು ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ 3 ಎಕರೆ 3 ಗುಂಟೆ ಜಮೀನನ್ನು ಅರ್ಜಿದಾರರು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸಿ ಕಬಳಿಸಲು ಯತ್ನಿಸಿದ್ದರು ಎಂಬುದು ಆರೋಪ. ‘ಈ ವಿವಾದವು ಸಂಪೂರ್ಣ ಜಮೀನಿಗೆ ಸಂಬಂಧಿಸಿದ ವ್ಯಾಜ್ಯ. ಪಿಒಎ ಅಡಿಯಲ್ಲಿ ಯಾವುದೇ ಅಪರಾಧ ಇಲ್ಲ’ ಎಂದು ಅರ್ಜಿದಾರರು ವಾದಿಸಿದ್ದರು.

‘ಜಾತಿ ಕಾರಣಕ್ಕೆ ಎಸಗಿದ ಅಪರಾಧ ಆಗದಿದ್ದರೆ ಭಾರತೀಯ ದಂಡ ಸಂಹಿತೆ(ಐಪಿಸಿ) ಅಡಿಯಲ್ಲಿ ಆರೋಪಿಯ ವಿರುದ್ಧ ಬೇರೆ ಪ್ರಕರಣಗಳನ್ನು ದಾಖಲಿಸಿ ದೋಷಾರೋಪ ಸಲ್ಲಿಸಬಹುದಾಗಿದೆ. ಸತ್ಯ ಮತ್ತು ಸಂದರ್ಭ ನೋಡಿಕೊಂಡು ಮುಂದುವರಿಯಬೇಕಾಗುತ್ತದೆ’ ಎಂದು ಪೀಠ ಹೇಳಿದೆ.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರನ್ನು ದೌರ್ಜನ್ಯ ಅಥವಾ ದಬ್ಬಾಳಿಕೆಯಿಂದ ರಕ್ಷಿಸುವುದು ಪಿಒಎ ಕಾಯ್ದೆಯ ಉದ್ದೇಶ. ಆದರೆ, ಅದನ್ನು ದುರುಪಯೋಗ ಮಾಡಿಕೊಳ್ಳಲು ಅನುಮತಿಸಲಾಗದು. ದೋಷಾರೋಪ ಪಟ್ಟಿ ಸಲ್ಲಿಸುವ ಮುನ್ನ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕಾದ ಜವಾಬ್ದಾರಿ ತನಿಖಾಧಿಕಾರಿ ಮೇಲೆ ಇದೆ’ ಎಂದು ಪೀಠ ತಿಳಿಸಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ