Breaking News

ಪೆಟ್ರೋಲ್ ದರ ಇಳಿಕೆ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ ; ಬೊಮ್ಮಾಯಿ

Spread the love

ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ.

ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆ ಮಾಡಬೇಕೆಂದು ಬಯಸುತ್ತೇವೆ. ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರು ಹೇಳಿದ್ದರು, ಈ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡುವ ತೀರ್ಮಾನ ಮಾಡಿದ್ದೇವೆ. ಇದರಿಂದಾಗಿ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ. ಕೊರತೆಯಾಗಲಿದೆ. ಆದಾಗ್ಯೂ ಡೀಸೆಲ್ ಹಾಗೂ ಪೆಟ್ರೋಲ್ ದರ ಇಳಿಕೆ ಮಾಡಿದ್ದೇವೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ