Breaking News

ಅಣ್ಣ-ತಮ್ಮ ಸೇರಿ ಕೆಲಸ ಕೊಟ್ಟಿದ್ದಾತನ ಮಗನನ್ನೇ ಕೊಂದು ಮೂಟೆ ಕಟ್ಟಿದ್ದರು!;

Spread the love

ಬೆಂಗಳೂರು: ಎರಡು ದಿನಗಳ ಹಿಂದೆ ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿ ಮೂಟೆಯಲ್ಲಿ ಕಂಡುಬಂದಿದ್ದ ವಿದ್ಯಾರ್ಥಿ ತರುಣ್‌ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತರುಣ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ನಾಸಿರ್‌ ಹಾಗೂ ಸೈಯದ್‌ ತಜ್ಮುಲ್‌ ಎಂಬವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಬ್ಬರೂ ಸಹೋದರರು, ತರುಣ್‌ಗೆ ಗೆಳೆಯರಾಗಿದ್ದವರು.

ಭಾರತೀನಗರ ಮುರುಗಪಿಳ್ಳೈ ನಿವಾಸಿ ತರುಣ್‌ (20) ತಂದೆ ಮಣಿಯವರಿಂದ 2 ಸಾವಿರ ರೂಪಾಯಿ ಪಡೆದುಕೊಂಡು ಪಟಾಕಿ ತರುವುದಾಗಿ ಹೇಳಿ ನ. 1ರಂದು ಹೊರಹೋಗಿದ್ದ. ರಾತ್ರಿಯಾದರೂ ಮರಳದ್ದರಿಂದ ಬಳಿಕ ಭಾರತೀನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಮಂಗಳವಾರ ರಾಜರಾಜೇಶ್ವರಿ ನಗರ ರಾಜಾಕಾಲುವೆ ಬಳಿ ಕಂಡುಬಂದ ಮೂಟೆಯಲ್ಲಿ ಅಪರಿಚಿತ ಶವ ಇರುವುದು ತಿಳಿದುಬಂದಿತ್ತು. ಪೊಲೀಸರು ತನಿಖೆ ನಡೆಸಿದಾಗ ಅದು ತರುಣ್‌ ಶವ ಎಂಬುದು ದೃಢಪಟ್ಟಿತ್ತು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ