Breaking News

LPG ಗ್ಯಾಸ್ ಸಿಲಿಂಡರ್ ಸ್ಪೋಟ: 7 ಜನರಿಗೆ ಗಂಭೀರ ಗಾಯ

Spread the love

ಬೆಂಗಳೂರು: ನಗರದ ಹೊರವಲಯದಲ್ಲಿನ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ( LPG Gas Cylinder Blast ) ಪರಿಣಾಮ, ಮನೆಯಲ್ಲಿದ್ದಂತ 7 ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವಂತ ಮಂಜುನಾಥ್ ರೆಡ್ಡಿ ಎಂಬುವರಿಗೆ ಸೇರಿದಂತೆ ಮನೆಯೊಂದರಲ್ಲಿ, ಉತ್ತರ ಭಾರತ ಮೂಲಕ ಏಳು ಕಾರ್ಮಿಕರು 2 ವರ್ಷಗಳಿಂದ ಬಾಡಿಗೆ ಇದ್ದರು.

ಇಂತಹ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ ಆಗಿದೆ.

ಈ ಘಟನೆ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ನಡೆದಿದ್ದು, ಸಿಲಿಂಡರ್ ಬ್ಲಾಸ್ಟ್ ನಿಂದಾಗಿ ಮನೆ ಕೂಡ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್, ಶಾಂತಿಬೈ, ಪ್ರಕಾಶ್, ಜೈಮುಲ್, ಮಂಜು ಹಾಗೂ ವಲ್ಲಿ ಎಂಬಂತ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ