ನವದೆಹಲಿ: ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ 40 ವರ್ಷಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡ ಇದೇ ರೀತಿಯ 67 ಪ್ರಕರಣಗಳನ್ನು ಉಲ್ಲೇಖಿಸಿ ಕೋರ್ಟ್ ಈ ರೀತಿ ಹೇಳಿದೆ.
ಕರ್ನಾಟಕದ ಬೆಳಗಾವಿಯ ಖಾನಾಪುರದ ಈರಪ್ಪ ಸಿದ್ದಪ್ಪ ಎಂಬುವವರು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿದ್ದರು. ಕರ್ನಾಟಕ ಹೈಕೋರ್ಟ್ ಮಾರ್ಚ್ 6, 2017 ರಂದು ಅವರಿಗೆ ಈ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು.
2010 ರಲ್ಲಿ ಕರ್ನಾಟಕದ ಖಾನಾಪುರ ಗ್ರಾಮದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಅಲ್ಲದೇ ಅಪರಾಧಿ ಸಂತ್ರಸ್ತೆಯ ಶವವನ್ನು ಚೀಲದಲ್ಲಿ ಕಟ್ಟಿಹಾಕಿ ಬೆನ್ನಿಹಳ್ಳ ಹೊಳೆಗೆ ಎಸೆದಿದ್ದ.
Laxmi News 24×7