Breaking News

ಅಕ್ರಮವಾಗಿ ಮದ್ಯ ಮಾರಾಟ ದಾಳಿ ಮಾಡಿದ ಪೊಲೀಸರ ಏಟು ಬಿತ್ತು ಮಗನ ಮರ್ಮಾಂಗದ ಮೇಲೆ..

Spread the love

ಬಾಗಲಕೋಟೆ: ವ್ಯಕ್ತಿಯೊಬ್ಬ ಮನೆಯಲ್ಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ ಥಳಿಸಿದ್ದು, ತಪ್ಪಿಸಲು ಹೋದ ಮಗನ ಮರ್ಮಾಂಗಕ್ಕೂ ಏಟು ಬಿದ್ದ ಪ್ರಕರಣ ನಡೆದಿದೆ. ಮದ್ಯ ಮಾರುತ್ತಿದ್ದ ತಂದೆ ಹಾಗೂ ಆತನ ಪುತ್ರ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ ಹೊಸಮನಿ ಹಾಗೂ ಆತನ ಪುತ್ರ ಸಂತೋಷ ಹೊಸಮನಿ ಆಸ್ಪತ್ರೆಗೆ ದಾಖಲಿಸಲ್ಪಟ್ಟವರು. ಹನುಮಂತ ಮನೆಯಲ್ಲಿ ಮದ್ಯ ಮಾರುತ್ತಿರುವ ವಿಷಯ ತಿಳಿದು ಇಂದು ದಾಳಿ ಮಾಡಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಪೊಲೀಸರು ತಂದೆಗೆ ಹೊಡೆಯುತ್ತಿದ್ದರು. ಅದನ್ನು ಬಿಡಿಸಲು ಹೋದ ನನಗೆ ಮರ್ಮಾಂಗದ ಮೇಲೆ ಲಾಠಿ ಏಟು ಬಿದ್ದಿದೆ ಎಂದು 12 ವರ್ಷದ ಸಂತೋಷ ಹೇಳಿಕೊಂಡಿದ್ದಾನೆ. ತಂದೆ-ಮಗ ಇಬ್ಬರೂ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಜಮಖಂಡಿ ಅಬಕಾರಿ ಪೊಲೀಸರ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ