ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ ಅವರು ನಡ್ಡಾ ಅವರನ್ನು ಸಹಜವಾಗಿ ಭೇಟಿಯಾಗಿದ್ದಾರೆ