Breaking News

ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್: ಈಶ್ವರಪ್ಪ

Spread the love

ಕಾಂಗ್ರೆಸ್‍ನವರು ಬದುಕಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಬಿಟ್ ಕಾಯಿನ್ ದಂಧೆಯ ತನಿಖೆ ಪಾರದರ್ಶಕವಾಗಿ ನಡೆದರೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರದಿಂದ ಕೆಳಗೆ ಇಳಿಯಬೇಕಾಗುತ್ತದೆ. ಬಿಜೆಪಿಯಲ್ಲಿ ಮೂರನೇ ಹೊಸ ಮುಖ್ಯಮಂತ್ರಿ ನೇಮಕವಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಈಶ್ವರಪ್ಪ ನಾ ಮುಂದು ತಾ ಮುಂದು ಎಂದು ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ.

ಸಿದ್ದರಾಮಯ್ಯ ಡಿಕೆಶಿ ಬಳಿಕ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾತಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬೇಜವ್ದಾರಿಯಾಗಿ ಮಾತನಾಡಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಚೂರು ಪೇಪರ್ ಇದ್ರೂ ಬಹಿರಂಗಪಡಿಸಲಿ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆ ಭಾಗದಲ್ಲಿ ವಸೂಲಿ ಕಿಂಗ್ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ