Breaking News

ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆ

Spread the love

ಬೆಂಗಳೂರು: ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ದಂಧೆ ಆರೋಪಿ, ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಹೋಟೆಲ್ ನಲ್ಲಿ ನದೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧನಕ್ಕೀಡಾಗಿದ್ದ ಶ್ರೀಕಿಯನ್ನುನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಆದರೀಗ ಎರಡೇ ದಿನದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಬಿಡುಗಡೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಕಿ, ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಅಂತಹ ಯಾವ ಕೆಲಸವನ್ನೂ ಮಾಡಿಲ್ಲ. ನನಗೆ ಜಾಮೀನು ಕೊಟ್ಟವರು ಯಾರು ಎಂಬುದೂ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಇದೆಲ್ಲವೂ ಸುಮ್ಮನೆ ಮೀಡಿಯಾ ಹೈಪ್. ಇದ್ಯಾವುದೂ ಕೂಡ ನನಗೆ ಗೊತ್ತಿಲ್ಲ. ನಾನು ಅಂತಹ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಹೇಳಿದ್ದಾನೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ