Breaking News

ದೇವೇಗೌಡರ ಹಾಗೂ ಕುಮಾರಸ್ವಾಮಿ ಹೆಸರು ಹೇಳಿದಂತೆ ಓಡಿ ಬಂದು ಒತ್ತೋರು ಯಾರೂ ಇಲ್ಲ. :

Spread the love

ಹಾಸನ: ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ (Council Election) ಘೋಷಣೆ ಹಿನ್ನೆಲೆ ಜಿಲ್ಲೆಯ ಸಂಸದ ಪ್ರಜ್ವಲ್​​ ರೇವಣ್ಣ(Prajwal Revanna) ಅವರ ಅಧಿಕೃತ ನಿವಾಸದಲ್ಲಿ ಜೆಡಿಎಸ್ ಶಾಸಕರು, ಮುಖಂಡರು, ಕಾರ್ಯಕರ್ತರ ಸಭೆ (JDS Meeting) ನಡೆಸಿದರು. ಅಭ್ಯರ್ಥಿ ಆಯ್ಕೆ ಸಂಬಂಧ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(H. D. Deve Gowda), ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರುಗಳಾದ ಎಚ್.ಡಿ.ರೇವಣ್ಣ, ಕೆ.ಎಸ್.ಲಿಂಗೇಶ್, ಮಾಜಿಶಾಸಕರು, ಜಿ.ಪಂ. ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಟಿಕೆಟ್​​ ಗಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಡಾಕ್ಟರ್ ಸೂರಜ್ (Suraj Revanna) ಹೆಸರು ಹಾಗೂ ರೇವಣ್ಣ ಪತ್ನಿ ಭವಾನಿ ರೇವಣ್ಣ (Bhavani Revanna) ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.

ಸಭೆಯಲ್ಲಿ ಬೇಲೂರು ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ನಾನು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಸರ್ವೆ ಮಾಡಿದ್ದೇನೆ. ಎಲ್ಲರ ಅಭಿಪ್ರಾಯ ಒಂದೇ ಆಗಿದೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಿ, ಅವರನ್ನು ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಜಿಲ್ಲೆಯಲ್ಲಿ ಶೇ.60 ರಿಂದ 70 ರಷ್ಟು ಜೆಡಿಎಸ್ ಗ್ರಾಮ ಸದಸ್ಯರಿದ್ದಾರೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿ ಎಂದು ಸಭೆಯಲ್ಲಿ ಒತ್ತಾಯ ಕೇಳಿ ಬಂತಿತು.

ಭವಾನಿ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ

ಎಂಎಲ್‌ಸಿ ಚುನಾವಣೆಗೆ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಸಭೆಯಲ್ಲಿ ಪದೇ ಪದೇ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಹೇಳಿ ಬಂದಿದೆ. ಶಾಸಕ ಲಿಂಗೇಶ್ ಅವರ ಮಾತಿಗೆ ನಾನೂ ಕೂಡ ಸಹಮತ ವ್ಯಕ್ತಪಡಿಸುತ್ತೇನೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದ್ದಾರೆ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದು ಅಭ್ಯರ್ಥಿ ನಿರ್ಧಾರ ಮಾಡುವುದಾಗಿ ಸಭೆಗೂ ಮುನ್ನ ಹೆಚ್‌.ಡಿ.ರೇವಣ್ಣ ಹೇಳಿದ್ದರು.


Spread the love

About Laxminews 24x7

Check Also

ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.

Spread the love ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ