ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು.
ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು ಅಂತ ತಿಳಿಸಿದರು. ಇನ್ನೂ ನವದೆಹಲಿಯಲ್ಲಿ ಹೆಚ್ಚುತ್ತಿರುವ ಪರಿಸರ ಅವ್ಯವಸ್ಥೆ ವಿರುದ್ದ ಖುದ್ದು ಸುಪ್ರಿಂಕೋರ್ಟ್ ಕಿಡಿಕಾರಿತ್ತು, ಇದಲ್ಲದೇ ಲಾಕ್ಡೌನ್ ಬಗ್ಗೆ ಸಲಹೆ ನೀಡಿತ್ತು.
Laxmi News 24×7