Breaking News
Home / ಜಿಲ್ಲೆ / ಬೆಳಗಾವಿ / ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್

ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣ 13 ಜನರ ವಿರುದ್ಧ ಚಾರ್ಜ್ ಶೀಟ್

Spread the love

ಬೆಳಗಾವಿ: ಆನಂದ ಅಪ್ಪುಗೋಳ ಮಾಲಿಕತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 13 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಸಿಐಡಿ ಡಿವೈಎಸ್​​​ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ಸುದೀರ್ಘ ತನಿಖೆ ನಡೆಸಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆನಂದ ಅಪ್ಪುಗೋಳ  ಸೇರಿ ಆಡಳಿತ ಮಂಡಳಿಯ 13 ಜನ ನಿರ್ದೇಶಕರು ಗ್ರಾಹಕರ ಠೇವಣಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಮುಂಬೈ ಕರ್ನಾಟಕದ ಕೂಲಿ ಕಾರ್ಮಿಕರಿಂದ ಹಿಡಿದು ಶ್ರೀಮಂತರು ಹಾಗೂ ಅಧಿಕಾರಿಗಳಿಂದ ಹಣ ದ್ವಿಗುಣಗೊಳಿಸುವ ಆಮೀಷವೊಡ್ಡಿ 275 ಕೋಟಿ ಸ್ಥಿರ ಠೇವಣಿ ಪಡೆಯಲಾಗಿತ್ತು. ಈ ಹಣವನ್ನು ಆನಂದ ಅಪ್ಪುಗೋಳ ಸೇರಿ 13 ಜನರು 275 ಕೋಟಿ ಠೇವಣಿ ಹಣ ವಂಚನೆ ಮಾಡಿ, ಎಲ್ಲ ಹಣವನ್ನು ಸ್ವಂತಕ್ಕೆ ಬಳಸಿ ಗ್ರಾಹಕರಿಗೆ ವಂಚಿಸಿದ್ದರು ಎಂಬ ಆರೋಪವಿದೆ.

ಈ ಕುರಿತು ಸಿಐಡಿಯಿಂದ ಮೊದಲ ಹಂತದ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ  2,063 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ