ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ
ಚಿಕ್ಕೋಡಿ – ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವನ್ನು ಪಡೆಯಲು ವರ್ಷಗಳ ಕಾಲ ಅಡ್ಡಾಡಬೇಕಾದ ಸಂದರ್ಭದಲ್ಲಿ ಗೋಡೆ ಬಿದ್ದು ಮೃತನಾದ ವ್ಯಕ್ತಿಯ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಶಾಸಕ ಗಣೇಶ ಹುಕ್ಕೇರಿ ಚೆಕ್ ವಿತರಿಸಿದರು.
ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು.
ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ,
ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.
ಬುಧವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅತಿಯಾದ ಮಳೆಯಾದ ಹಿನ್ನೆಲೆಯಲ್ಲಿ ಮನೆ ಛಾವಣಿ ಕುಸಿದು ಬಿದ್ದು ಸದಲಗಾ ನಿವಾಸಿ ಕಲ್ಲಪ್ಪ ಪರಗೌಡ ನಿಧನರಾದರು.
ಈ ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ,
ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ತಕ್ಷಣವೇ ಸರಕಾರದಿಂದ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿಸಿ ಚೆಕ್ ಕೂಡ ವಿತರಿಸಿದರು. ಅಲ್ಲದೆ, ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸದಲಗಾ ಸಿಪಿಐ, ಪಿಎಸ್ಐ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.