Breaking News
Home / ಜಿಲ್ಲೆ / ಬೆಳಗಾವಿ / ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಬಾಲಚಂದ್ರ ಜಾರಕಿಹೊಳಿ 

ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಬಾಲಚಂದ್ರ ಜಾರಕಿಹೊಳಿ 

Spread the love

ಗೋಕಾಕ :  ಅರಭಾವಿ ಮತಕ್ಷೇತ್ರದ  ಶಾಸಕ ಬಾಲಚಂದ್ರ ಜಾರಕಿಹೊಳಿ  ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

 

ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ ಮೂಲ ಸೌಕರ್ಯ ಒದಗಿಸುತ್ತಿದ್ದಾರೆ.

ಪಂಚಾಯತಿ ಸಿಬ್ಬಂದಿಗಳು, ಶಾಲಾ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳ ಜತೆಗೆ  ಶಾಸಕ ಆಪ್ತ ಸಹಾಯಕರು ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ,  ಅವಶ್ಯವಿರುವ ಮೂಲ ಸೌಕರ್ಯ ಒದಗಿಸಿದರು.ಕೊರೊನಾ ಸೋಂಕು ಸಹ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ , ಸ್ಯಾನಿಟೈಸರ್, ವೈದ್ಯಕೀಯ ಸೌಲಭ್ಯ, ಬಿಸಿ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಜತೆಗೆ ದನ ಕರುಗಳಿಗೆ ಮೇವಿನ ವ್ಯವಸ್ಥೆಯನ್ನು ಕೂಡಾ ಮಾಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ