Breaking News

ಕಲಘಟಗಿ: ಕೆಲಸದ ಒತ್ತಡ ತಾಳಲಾರದೇ ಅಧಿಕಾರಿ ಆತ್ಮಹತ್ಯೆ

Spread the love

ಕಲಘಟಗಿ: ಪಟ್ಟಣದ ಬಸ್ ನಿಲ್ದಾಣದ ಅಧಿಕಾರಿ ಹುಬ್ಬಳ್ಳಿಯ ಸುಭಾಷ ಬುಲಬುಲೆ (58) ಎಂಬುವವರು ಕೆಲಸದ ಒತ್ತಡ ತಾಳಲಾರದೆ ಪಾಸ್ ವಿತರಣೆ ಕೇಂದ್ರದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

 

‘ಈಗ ವಿದ್ಯಾರ್ಥಿಗಳ ಪಾಸುಗಳನ್ನು ಕಂಪ್ಯೂಟರ್ ಮೂಲಕ ವಿತರಣೆ ಮಾಡುತ್ತಿದ್ದು ನಾನು ಕಂಪ್ಯೂಟರ್ ತರಬೇತಿ ಪಡೆದಿಲ್ಲದ ಕಾರಣ ಪಾಸ್ ನೀಡಲು ಮಾಹಿತಿ ಗೊತ್ತಾಗುತ್ತಿಲ್ಲ. ಹೀಗಾಗಿ ಕೆಲಸದ ಒತ್ತಡ ಜಾಸ್ತಿ ಆಗಿದೆ’ ಎಂದು ಪತ್ರ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಸಿ. ಎಂ ನಿಂಬಣ್ಣವರ ಭೇಟಿ ನೀಡಿ ಸೂಕ್ತವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು

Spread the loveಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ