Breaking News
Home / ರಾಜಕೀಯ / ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ಉತ್ತೇಜನ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ಉತ್ತೇಜನ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

Spread the love

ಬೆಳಗಾವಿ: 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ತೋಟಗಾರಿಕೆ ಬೆಳೆಗಳಲ್ಲಿ ಗುಣಮಟ್ಟದ ಉತ್ಪಾದನೆಗೆ ವಿಶೇಷ ಉತ್ತೇಜನ ಕಾರ್ಯಕ್ರಮದಡಿ ನೀರಿನಲ್ಲಿ ಕರಗುವ ರಸಗೊಬ್ಬರ (Water Soluble Fertilizers) ಖರೀದಿಗೆ ಸಹಾಯಧನ, ಲಘುಪೋಷಕಾಂಶಗಳ ಮಿಶ್ರಣ (Crop Special) ಹಣ್ಣು/ಹೂವು ಬೆಳೆ ಹೊದಿಕೆಗಳಿಗೆ (Fruit/Plant cover) ಸುರಂಗ ಮಾದರಿ ಪಾಲಿಹೌಸ್ ನಿರ್ಮಾಣಕ್ಕೆ, ತೋಟಗಾರಿಕೆ ಬೆಳೆಗಳ ಮೇಲಾವರಣ ( Canopy Management ) ನಿರ್ವಹಣೆಗೆ, ಹಳೆಯ ಪಾಲಿಹೌಸ್‌ಗಳಲ್ಲಿ ಪಾಲಿಥಿನ್ ಶೀಟ್ ಹಾಗೂ ಗಿಡಗಳ ಬದಲಾವಣೆಗೆ, ಕ್ಷೇತ್ರಮಟ್ಟದಲ್ಲಿ ವಿಂಗಡಣೆ, ಪ್ಯಾಕಿಂಗ್ ಮತ್ತು ಸಂಗ್ರಹಣೆ ಮಾಡುವ ಘಟಕಗಳಿಗೆ ( Farm Gate ) ಸಹಾಯಧನ, ಕೊಯ್ಲೋತ್ತರ ನಂತರ ಬಳಸುವ ಪ್ಲಾಸ್ಟಿಕ್ ಕ್ರೇಟ್ಸ್, ಪ್ಯಾನೆಟ್ ಬಾಕ್ಸಿಸ್, ಕೊರುಗೆಟೆಡ್ ಬಾಕ್ಸಿಸ್‌ಗಳ ಖರೀದಿಗೆ ಸಹಾಯಧನ ಹಾಗೂ ಸಮುದಾಯ/ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ತೋಟಗಾರಿಕೆ ಬೆಳೆಗಾರರು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ವಿವಿಧ ಯೋಜನೆಗಳ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಸಂಬಂಧಿಸಿದ ಹೋಬಳಿ ಹಾಗೂ ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವುದು. ಅಥವಾ ದೂರವಾಣಿ ಸಂಖ್ಯೆ: ಅಥಣಿ: 08289-285099 ಚಿಕ್ಕೋಡಿ: 08338-274943 ಖಾನಾಪೂರ: 08336-223387 ಬೈಲಹೊಂಗಲ: 08288-233758 ಗೋಕಾಕ: 08332-220382 ರಾಯಬಾಗ: 08331-225049 ಸವದತ್ತಿ: 08330-222082 ಬೆಳಗಾವಿ: 0831-2431559, ಹುಕ್ಕೇರಿ: 08333-265915 ರಾಮದುರ್ಗ: 08335-241512 ಗೆ ಸಂಪರ್ಕಿಸಬಹುದು ಎಂದು ಬೆಳಗಾವಿಯ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ