ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆಯುವ ಮೂಲಕ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸ್ವಲ್ಪ ತಡವಾದರೂ ಈ ದೃಢ ನಿರ್ಧಾರ ರೈತ ಸಮುದಾಯಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ. ಪ್ರತಿಷ್ಠೆ ಬದಿಗಿಟ್ಟುರೈತರ ಹೋರಾಟ ನೋಡಿದ ಮೇಲೆ ನರೇಂದ್ರ ಮೋದಿಯವರು ಮೂರು ಕಾಯ್ದೆ ಹಿಂಪಡೆದಿದ್ದು, ದೇಶದಲ್ಲಿ ರೈತರ ವಿಶ್ವಾಸ, ಗೌರವ ಹೆಚ್ಚಾಗಿದೆ. ರೈತ ಸಮುದಾಯಕ್ಕೆ ಬಹಳ ಒಳ್ಳೆಯದಾಗುತ್ತೆ. 11ತಿಂಗಳ ಸತ್ಯಾಗ್ರಹ ನಡೆಸಿಕೊಂಡು ಬಂದಿದ್ದಾರೆ. ತಡವಾದರೂ ಅದರ ಸತ್ಯಾಂಶ ನೋಡಿಕೊಂಡು ಪ್ರಧಾನಿಯವರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.
Laxmi News 24×7