ಹೈದರಾಬಾದ್: ಆಗಸ್ಟ್ 27 ರಂದು ವಿವಾಹವಾಗಿದ್ದ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪ್ರಗತಿನಗರದಲ್ಲಿ ಶನಿವಾರ ನಡೆದಿದೆ.
ಮೃತ ಸುಧಾರಾಣಿ ಮೂಲತಃ ಕಾಮರೆಡ್ಡಿ ಜಿಲ್ಲೆಯವರಾಗಿದ್ದು, ಒಂದು ವಾರದಿಂದ ಬಾಚುಪಲ್ಲಿಯಲ್ಲಿ ಪತಿಯೊಂದಿಗೆ ನೆಲೆಸಿದ್ದರು. ಕಿರಣ್ ತನ್ನ ಹೆಂಡತಿ ಅಕ್ರಮ ವಿವಾಹೇತರ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗಷ್ಟೇ ಕುಟುಂಬದ ಹಿರಿಯರು ಇಬ್ಬರ ಜಗಳವನ್ನು ಬಗೆಹರಿಸಿ ಹೈದರಾಬಾದ್ಗೆ ಕಳುಹಿಸಿದ್ದಾರೆ.
ಕಿರಣ್ ಕೋರಿಕೆಯ ಮೇರೆಗೆ ಸುಧಾರಾಣಿ ಅವರ ಪೋಷಕರು ಶನಿವಾರ ಮಧ್ಯಾಹ್ನ ಅವರ ನಿವಾಸಕ್ಕೆ ಆಗಮಿಸಿದ್ದರು. ಗಂಟೆಗಟ್ಟಲೆ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬಾಗಿಲು ಒಡೆದಿದ್ದಾರೆ. ಕುತ್ತಿಗೆ ಸೀಳಿದ ಮತ್ತು ಕೈಕಾಲು ಬೆರಳುಗಳು ಕಾಣೆಯಾದ ಸ್ಥಿತಿಯಲ್ಲಿ ಹಾಸಿಗೆಯ ಮೇಲೆ ಸುಧಾರಾಣಿಯ ದೇಹ ಸಿಕ್ಕಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕಿರಣ್ ಎಂಬಾತನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆತ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ. ಪೊಲೀಸರು ಕಿರಣ್ ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಸುದ್ದಿ ತಿಳಿದ ಸುಧಾರಾಣಿ ಸಂಬಂಧಿಕರು ಕಾಮರೆಡ್ಡಿಯಲ್ಲಿರುವ ಕಿರಣ್ ಪೋಷಕರ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅವರ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ