ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.