Breaking News

ಪಂಜಾಬ್ ಸಿಧು, ಕರ್ನಾಟಕ ಸಿದ್ದು ಇಬ್ಬರಿಂದಲೂ ಕಾಂಗ್ರೆಸ್ ಗೆ ನಷ್ಟ:

Spread the love

ಸಿಧು, ಸಿದ್ದು ಅವರಿಂದ ಕಾಂಗ್ರೆಸ್ ನಾಶವಾಗಲಿದೆ

ಕಾರ್ಯಕ್ರಮಕ್ಕು ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ರಾಷ್ಟ್ರೀಯ ಪಕ್ಷ ಎನ್ನುವ ಕಾಂಗ್ರೆಸ್ ಕೆಲವೆಡೆ ಮಾತ್ರ ಇದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಮನ್ವಯತೆ ಇಲ್ಲ. ಪಂಜಾಬ್ ನ ಸಿಧು ಹಾಗೂ ರಾಜ್ಯದ ಸಿದ್ದು ಅವರಿಂದ ಕಾಂಗ್ರೆಸ್ ವಿನಾಶ ಆಗಲಿದೆ ಎಂದು ಭವಿಷ್ಯ ನುಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಜಟಾಪಟಿ ಶುರುವಾಗಿದೆ.  ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹೆಚ್ಚು ದಿನ ಉಳಿಯೊಲ್ಲ. ಅಧಿಕಾರಕ್ಕಾಗಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷವನ್ನ ಸರ್ವನಾಶ ಮಾಡಿಯೇ ಹೋಗಿತ್ತಾರೆ  ಎಂದು ವ್ಯಂಗ್ಯವಾಡಿದರು.

ಇನ್ನು ಕೃಷಿ ಕಾಯ್ದೆಯನ್ನು ಪ್ರಧಾನಿ ಮೋದಿ ಹಿಂಪಡೆದಿರುವ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ಪ್ರಧಾನಿ ಮೋದಿಯವರನ್ನ ಹಾಡಿ ಹೊಗಳಿದ್ದಾರೆ. ಮೋದಿಯವರು ವಿಶ್ವದ ಶ್ರೇಷ್ಠ ನಾಯಕರಲ್ಲಿ ಮುಂಚೂಣಿಯಲ್ಲಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ಗೆ ಮೋದಿ ವಿರುದ್ದ ಮಾತನಾಡಲು ಯಾವುದೇ ವಿಚಾರ ಇರಲಿಲ್ಲ.
ಕೃಷಿ ಕಾಯ್ದೆಗಳು ರೈತರ ಪರವಾಗಿತ್ತು. ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಸಿಗುತ್ತಿಲ್ಲ. ಹಾಗಾಗಿ ಈ ಕಾಯ್ದೆಗಳು ತಂದಿದ್ದಾರೆ.  ರೈತರ ಆದಾಯ ದ್ವಿಗುಣಗೊಳಿಸುವ ಮಾತನ್ನ ಮೋದಿಯವರು ಹೇಳಿದ್ದರು. ಕೃಷಿ ಕಾಯ್ದೆಯು ರೈತರು ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗಿತ್ತು,


Spread the love

About Laxminews 24x7

Check Also

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

Spread the loveರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು (ಜ.1) ರಾಯಚೂರು  ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ