Breaking News
Home / ಜಿಲ್ಲೆ / ಬಾಗಲಕೋಟೆ / ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ

ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ

Spread the love

ಬಾಗಲಕೋಟೆ: ನಗರದ ಡಾ. ಪ್ರಹ್ಲಾದ ಭೋವಿ ಎಂಬುವರು ಕಳೆದ 15 ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ವರ್ಲ್ಡ್ ಬುಕ್ ಆಫ್​​ ರೆಕಾರ್ಡ್​​ ದಾಖಲೆ ಮಾಡುವ ಜೊತೆಗೆ ರಾಜ್ಯದ ವಿವಿಧ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ.

ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಡೆಸಿಕೊಂಡು ಬರುವುದರ ಜೊತೆ ಹಲವು ಸಾಧನೆಗೈದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ, ವಯಸ್ಕರಿಗೆ ಅಕ್ಷರ ಜ್ಞಾನದ ಜಾಗೃತಿ ಮೂಡಿಸಿದ್ದಾರೆ. ಹೆಚ್​ಐವಿ ಸೋಂಕು ತಡೆಯುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಪ್ರಚಾರ ಮಾಡಿದ್ದಾರೆ. ಗಿಡ ಮರಗಳನ್ನು ಬೆಳೆಸಿ ಎಲ್ಲೆಡೆ ಹಚ್ಚಹಸಿರಾಗುವಂತೆ ಮಾಡಿ ಪರಿಸರದ ಕಾಳಜಿ ಮೆರೆದಿದ್ದಾರೆ. ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಮಾಡುವ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸುವುದು ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯ ಮಾಡಿ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿದ್ದಾರೆ.ಸಾಕ್ಷರತೆ ಬಗ್ಗೆ ಸ್ವತಃ ಹಾಡು ಬರೆದು ಪುಸ್ತಕ ರೂಪದಲ್ಲಿ ಹೂರಹಾಕಿದ್ದು, ಸಾಹಿತ್ಯ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಂಡಿದ್ದಾರೆ. ಕೋವಿಡ್ -19 ಕರಾಳ ದಿನಗಳಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಮಾಸ್ಕ್​​, ಸ್ಯಾನಿಟೈಸರ್​​ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ಮಂಗಳಮುಖಿಯರಿಗೆ, ಬಡವರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಹೀಗೆ ಸಾಕಷ್ಟು ಕಾರ್ಯಗಳನ್ನು ಮಾಡಿರುವ ಇವರಿಗೆ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸದ್ಯ ಇವರ ಮನೆಯಲ್ಲಿ ಎಲ್ಲಿ ನೋಡಿದರೂ ಪ್ರಶಸ್ತಿಗಳೇ ಕಂಡು‌ಬರುತ್ತಿವೆ


Spread the love

About Laxminews 24x7

Check Also

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Spread the loveಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ