Breaking News

ಕೆಲವೇ ನಿಮಿಷಗಳಲ್ಲಿ ವಿಚಾರಣೆ ಮುಗಿಸಿ ಹೊರಟ ಹಂಸಲೇಖ

Spread the love

ಬೆಂಗಳೂರು: ಪೇಜಾವರ ಶ್ರೀಗಳ ಕುರಿತ ಹೇಳಿಕೆ ಕುರಿತಂತೆ ಇಂದು ವಿಚಾರಣೆಗೆ ಹಾಜರಾಗಿದ್ದ ಹಿರಿಯ ನಿರ್ದೇಶಕ ಹಂಸಲೇಖ ಅವರು ವಿಚಾರಣೆ ಮುಗಿಸಿ ಪೊಲೀಸ್​ ಠಾಣೆಯಿಂದ ಹೊರಟ್ಟಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ರಾಣೆ ಬಳಿ ವಕೀಲರೊಂದಿಗೆ ಆಗಮಿಸಿದ್ದ ಹಂಸಲೇಖ ಅವರು ಬಸವನಗುಡಿ ಠಾಣೆ ಠಾಣಾಧಿಕಾರಿ ರಮೇಶ್ ನೇತೃತ್ವದಲ್ಲಿ ವಿಚಾರಣೆ ಎದುರಿಸಿದರು. ಪೊಲೀಸರು ಪ್ರಕರಣದಲ್ಲಿ ಸುಮಾರು 25-30 ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಹಂಸಲೇಖ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಕೀಲ ದ್ವಾರಕನಾಥ್ ಅವರು, ನಾವು ಕಾನೂನಿಗೆ ಗೌರವ ಕೊಡ್ತೀವಿ. ಮತ್ತೆ ವಿಚಾರಣೆಗೆ ಕರೆದರೆ ಬರ್ತಿವಿ ಅಂತ ಹೇಳಿದ್ದಾರೆ. ಈಗ ಕಾನೂನು ಪ್ರಕ್ರಿಯೆ ಆರಂಭವಾಗಿದೆ. ಆದ್ದರಿಂದ ಹೆಚ್ಚಿನ ಮಾಹಿತಿ ನೀಡಲು ಆಗೋದಿಲ್ಲ. ನಮಗೆ ಸಂವಿಧಾನದಲ್ಲಿ ಗೌರವ ಇದೆ. ಮುಂದಿನ ವಿಚಾರಣೆಗೆ ಯಾವುದೇ ದಿನಾಂಕ ಕೊಟ್ಟಿಲ್ಲ. ಅಗತ್ಯವಿದ್ದರೆ ವಿಚಾರಣೆ ಕರೆಯುತ್ತೇವೆ ಅಂತ ಹೇಳಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್.

Spread the love ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್. – ಜನವರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ