Breaking News

ಕೆಲವೇ ನಿಮಿಷಗಳಲ್ಲಿ ವಿಚಾರಣೆ ಮುಗಿಸಿ ಹೊರಟ ಹಂಸಲೇಖ

Spread the love

ಬೆಂಗಳೂರು: ಪೇಜಾವರ ಶ್ರೀಗಳ ಕುರಿತ ಹೇಳಿಕೆ ಕುರಿತಂತೆ ಇಂದು ವಿಚಾರಣೆಗೆ ಹಾಜರಾಗಿದ್ದ ಹಿರಿಯ ನಿರ್ದೇಶಕ ಹಂಸಲೇಖ ಅವರು ವಿಚಾರಣೆ ಮುಗಿಸಿ ಪೊಲೀಸ್​ ಠಾಣೆಯಿಂದ ಹೊರಟ್ಟಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ರಾಣೆ ಬಳಿ ವಕೀಲರೊಂದಿಗೆ ಆಗಮಿಸಿದ್ದ ಹಂಸಲೇಖ ಅವರು ಬಸವನಗುಡಿ ಠಾಣೆ ಠಾಣಾಧಿಕಾರಿ ರಮೇಶ್ ನೇತೃತ್ವದಲ್ಲಿ ವಿಚಾರಣೆ ಎದುರಿಸಿದರು. ಪೊಲೀಸರು ಪ್ರಕರಣದಲ್ಲಿ ಸುಮಾರು 25-30 ಪ್ರಶ್ನಾವಳಿಗಳನ್ನು ಸಿದ್ಧಪಡಿಸಿ ಹಂಸಲೇಖ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಕೀಲ ದ್ವಾರಕನಾಥ್ ಅವರು, ನಾವು ಕಾನೂನಿಗೆ ಗೌರವ ಕೊಡ್ತೀವಿ. ಮತ್ತೆ ವಿಚಾರಣೆಗೆ ಕರೆದರೆ ಬರ್ತಿವಿ ಅಂತ ಹೇಳಿದ್ದಾರೆ. ಈಗ ಕಾನೂನು ಪ್ರಕ್ರಿಯೆ ಆರಂಭವಾಗಿದೆ. ಆದ್ದರಿಂದ ಹೆಚ್ಚಿನ ಮಾಹಿತಿ ನೀಡಲು ಆಗೋದಿಲ್ಲ. ನಮಗೆ ಸಂವಿಧಾನದಲ್ಲಿ ಗೌರವ ಇದೆ. ಮುಂದಿನ ವಿಚಾರಣೆಗೆ ಯಾವುದೇ ದಿನಾಂಕ ಕೊಟ್ಟಿಲ್ಲ. ಅಗತ್ಯವಿದ್ದರೆ ವಿಚಾರಣೆ ಕರೆಯುತ್ತೇವೆ ಅಂತ ಹೇಳಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ