Breaking News

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು

Spread the love

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆಆಧಾರದಲ್ಲಿ ನೇಮಕಗೊಂಡು ನಂತರ ಕಾಯಂಗೊಂಡಿರುವ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ.

 

ಕಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜುರು ಮಾಡಬೇಕು ಎಂದು ಪರಿಶೀಲನಾ ಸಮಿತಿ ಶಿಫಾರಸು ಮಾಡಿದೆ.

 

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ನಂತರ ಕಾಯಂ ಆಗಿರುವ ಬೋಧಕ ವರ್ಗದ ವೇತನ ಮತ್ತು ಪಿಂಚಣಿ ಪುನರ್ ನಿಗದಿಗಾಗಿ ಇಲಾಖೆಯು ರಚಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ನೇತೃತ್ವದ ಪರಿಶೀಲನಾ ಸಮಿತಿಯು ಕಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು ಮಾಡಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ