Breaking News

ಗುಜನಾಳ ಗ್ರಾಮದ ಬೂತ್ ಗೆ ಶಾಸಕ ಸತೀಶ್ ಜಾರಕಿಹೊಳಿ, ಕೊಣ್ಣೂರ ಗ್ರಾಮಕ್ಕೆ ರಾಹುಲ್ , ಸಿಂದಿಕುರಭೇಟ ಪ್ರಿಯಾಂಕಾ ಜಾರಕಿಹೊಳಿ,: ಬೂತ್ ಏಜೆಂಟ

Spread the love

ಗೋಕಾಕ್ : ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆಗೆ ನಾನೇ ಬೂತ್ ಮಟ್ಟದ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತೇನೆಂದು ಸ್ವತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಬೂತ್ ಮಟ್ಟದ ಏಜೆಂಟರುಗಳ ಆಯ್ಕೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ತಿಳಿಸಿದ್ದಾರೆ.
ಗುಜನಾಳ ಮತಗಟ್ಟೆಯಲ್ಲಿ ಪ್ರತಿ ಬಾರಿಯೂ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರಭಾವ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಸತೀಶ್ ಅವರು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ . ಇದುವರೆಗೂ ಯಾವ ಶಾಸಕರು ಏಜೆಂಟರುಗಳಾಗಿ ಕಾರ್ಯನಿರ್ವಹಿಸಿದ ಉದಾಹರಣೆಗಳಿಲ್ಲ. ಸತೀಶ್ ಅವರು ಚುನಾವಣೆ ಏಜೆಂಟ್ ಆಗಿ ಘೋಷಿಸಿರುವುದು ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿದೆ.
ವಿಧಾನಪರಿಷತ್ ಚುನಾವಣೆ ಗೆಲುವಿಗಾಗಿ ಒಂದು ಹೊಸ ಪ್ರಯೋಗವನ್ನು ಮಾಡಲಾಗಿದೆ. ನಾವು ಗೆಲ್ಲಬೇಕಾಗಿದೆ. ಆದ್ದರಿಂದ ಗೆಲ್ಲಲಿಕ್ಕೆ ಏಜೆಂಟ್ ಆಗಲಿದ್ದೇನೆ, ಕ್ಲರ್ಕ್ ಕೂಡಾ ಆಗಲಿಕ್ಕೆ ಸಿದ್ದವಿದ್ದೇನೆ ಎಂದಿದ್ದಾರೆ.
ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ತಲಾ 30% ಮತಗಳು ಬರಲಿವೆ. ಈಗಾಗಲೇ ಗ್ರಾಮ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದಾರೆ. ಅವರಿಗೆ ತಿಳುವಳಿಕೆ ಹೇಳಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರ ಮತ ಹಾಕಲಿಕ್ಕೆ ಮನವಿ ಮಾಡುವುದೊಂದೆ ಕೆಲಸವಾಗಿದೆ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ