Breaking News

ಮದ್ಯದ ಅಮಲಿನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ ಕಾಮಾಂದ

Spread the love

ಯಾದಗಿರಿ: ಮದ್ಯದ ಅಮಲಿನಲ್ಲಿ ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿದ ಕಾಮಾಂದ ಬಳಿಕ ಪ್ರಶ್ನಿಸಿದರೆ ಭಿಕ್ಷುಕಿ ತನ್ನ ಪತ್ನಿಯಾಗಬೇಕು ಎಂದು ನಾಟಕವಾಡಿದ ಘಟನೆ ಯಾದಗಿರಿಯ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ಕಾಮುಕ ಹನುಮಂತ (40) ಬಂಧಿತ ಆರೋಪಿ. ಭಿಕ್ಷುಕಿಗೆ ಕಂಠಪೂರ್ತಿ ಮದ್ಯ ಕುಡಿಸಿ ಬಳಿಕ ತಾನೂ ಕುಡಿದು ಭಿಕ್ಷುಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರವೆಸಗಿದ್ದಾನೆ. ಇದನ್ನು ಸ್ಥಳೀಯರು ಪ್ರಶ್ನಿಸಿದಾಗ ಆಕೆ ನನ್ನ ಹೆಂಡತಿಯಾಗಬೇಕು ನಾಟಕ ಮಾಡಿದ್ದಾನೆ.

ಸ್ಥಳೀಯರು ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಕಾಮುಕನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ