ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದರು.
ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ ಆಯ್ಕೆ ಆಗುತ್ತಿತ್ತು. ಲಖನ್ ಜಾರಕಿಹೊಳಿ ಧೈರ್ಯ ಮಾಡದಿದ್ರೆ ಪರಿಸ್ಥಿತಿ ಬೇರೆ ಇರುತ್ತಿತ್ತು ಎಂದು ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.