Breaking News

ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ‘OPD’ ಬಂದ್​ಗೆ ಕರೆ

Spread the love

ಬೆಂಗಳೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಿದ್ದಾವೆ.

ವೈದ್ಯರಿಗೆ ಏಪ್ರಿಲ್ ತಿಂಗಳಿನಿಂದ ತಿಂಗಳಿಗೆ 10,000 ಕೋವಿಡ್ ಭತ್ಯೆ ಘೋಷಿಸಲಾಗಿತ್ತು.

ಆದರೆ ಈ ಬಗ್ಗೆ ಇನ್ನೂ ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿಲ್ಲ, ಇದಲ್ಲದೇ ಕೋವಿಡ್ ಅಪಾಯ ಭತ್ಯೆಗೆ ತಕ್ಷಣವೇ ಹಣವನ್ನು ಮಂಜೂರು ಮಾಡಬೇಕು ಹಾಗೂ ಸ್ನಾತಕೋತ್ತರ ಪದವೀಧರರು ಮತ್ತು ಇಂಟರ್ನ್‌ಗಳಿಗೆ ಸಕಾಲದಲ್ಲಿ ಸ್ಟೈ ಫಂಡ್ ಪಾವತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದಲ್ಲದೇ 018-19ರ ಶೈಕ್ಷಣಿಕ ವರ್ಷದ ಪ್ರಕಾರ, ಶೈಕ್ಷಣಿಕ ಶುಲ್ಕವನ್ನು ಪುನಾರಚಿಸಬೇಕು. ಶೈಕ್ಷಣಿಕ ಶುಲ್ಕವನ್ನು ₹30,000 ದಿಂದ ₹1,20,000ಕ್ಕೆ ಏರಿಸಲಾಯಿತು. ಇದು ಸುಮಾರು ಶೇ.40ರಷ್ಟು ಹೆಚ್ಚಳವಾಗಿದೆ

ಇನ್ನೂ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರೆಸಿಡೆಂಟ್ ಡಾಕ್ಟರ್ಸ್ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುತ್ತಿರುವುದಾಗಿ ಪ್ರಕಟಣೆ ಹೊರಡಿಸಿದ್ದಾರೆ‌.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ