ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಈ ವೇಳೆ ಮೃತ ಸಿದ್ದರಾಜುವಿಗೆ ರಾತ್ರಿ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ವಿಷಯ ತಿಳಿದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಒಂದು ರಾತ್ರಿ ಠಾಣೆಯಲ್ಲಿದ್ದು ಮಾರನೇ ದಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪೊಲೀಸ ಅಧಿಕಾರಗಳ ಈ ಎರಡು ವಿಭಿನ್ನ ಹೇಳಿಕೆಗಳೂ ಲಾಕಪ್ ಡೆತ್ ಆಗಿರುವ ಅನುಮಾನಗಳನ್ನು ಹುಟ್ಟು ಹಾಕುವಂತಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
Laxmi News 24×7