Breaking News
Home / ಜಿಲ್ಲೆ / ಬಿಜಾಪುರ / ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್

ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್

Spread the love

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು.

ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು ಕಾಂಗ್ರೆಸ್‌ ನಾಯಕರೇನೂ ಮಾತನಾಡುತ್ತಿಲ್ಲ. ಬದಲಾಗಿ ಬೊಮಾಯಿ ಸರಕಾರದಲ್ಲಿರುವ ಸಚಿವರೇ ಮಾತನಾಡುತ್ತಿದ್ದಾರೆ. ಇತರ ಸಚಿವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಸಚಿವ ಮುರುಗೇಶ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ನಾನು ಮಾತನಾಡುವುದಿಲ್ಲ, ನಿರಾಣಿ ಮುಂದಿನ ಸಿಎಂ ಎಂದು 


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ