ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.
ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು ಮುಳುಗಿದ್ದ ಉಮೇಶಪ್ಪನನ್ನು ಕೀಮ್ಸ್ ಆಸ್ಪತ್ರೆಗೆ ಕರೆದೊಯ್ದರು ಕೂಡಾ ಉಮೇಶಪ್ಪ ಕಲ್ಯಾಣಿಯಲ್ಲಿಯೇ ಮೃತಪಟ್ಟಿದ್ದ
ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ