Home / ರಾಜಕೀಯ / ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

Spread the love

ಹೊಸ ತಳಿ ವೇಗವಾಗಿ ಹರಡುತ್ತದೆ. ಆದರೆ, ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ. ಕಡ್ಡಾಯವಾಗಿ ತಪಾಸಣೆ ಆಗಿದ್ದರೂ, ರಿಪೋರ್ಟ್ ಬರೋವರೆಗೂ ಅವರನ್ನು ಕಳುಹಿಸುವುದಿಲ್ಲ. ನೆಗೆಟಿವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ಹೇಳಿದರು.

ಮಹಾರಾಷ್ಟ್ರದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟಿವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟು ಕೊಳ್ಳಲಾಗುವುದು ಎಂದರು.

ಅಧಿವೇಶನ ನಡೆಸುವ ಬಗ್ಗೆ ಸಿಎಂ ನಿರ್ಧಾರ:

ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ. ವಿಧಾನಸೌಧದ ಸಚಿವಾಲಯ ಸಿಬ್ಬಂದಿಯಿಂದಲೂ ಅಧಿವೇಶನ ಬೇಡ ಅಂತ ಹೇಳಿದ್ದಾರೆ.
ಸಿಎಂ ಕೂಡ ಗಮನ ಹರಿಸೋಣ ಅಂತ ಹೇಳಿದ್ದಾರೆ. ಸವಾಲು ಮತ್ತು ಬೇಡಿಕೆ ಎರಡೂ ಇದೆ. ದೆಹಲಿಯಿಂದ ಮುಖ್ಯಮಂತ್ರಿಗಳು ಬಂದ ನಂತರ ವಿಧಾನಸಭೆಯ ಸ್ಪೀಕರ್ ಹಾಗೂ ಪರಿಷತ್ ಸಭಾಪತಿ ಅವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಒಮಿಕ್ರೋನ್ ವೈರಸ್ ಬಗ್ಗೆ ಹೆಚ್ಚಿನ ಭಯ ಬೇಡ. 2 ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳಿ. ಕೆಲಸ ಮಾಡುವ ಪ್ರತಿಯೊಬ್ಬರೂ ಲಸಿಕೆ ಪಡೆಯುವುದು ಕಡ್ಡಾಯ. ಮುಂದಿನ ದಿನ ಮಾಲ್, ಥಿಯೇಟರ್​ಗೆ ಬರುವವರಿಗೆ ಲಸಿಕೆ ಕಡ್ಡಾಯ ಮಾಡಲಿದ್ದೇವೆ ಎಂದು ಹೇಳಿದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ