Breaking News

ಶಾಲೆಗಳಲ್ಲಿ ʼಮೊಟ್ಟೆ ವಿತರಣೆʼ ಆದೇಶ ವಾಪಸ್‌ ತೆಗೆದುಕೊಳ್ಳಿ, ಇಲ್ಲವಾದ್ರೆ ಹೋರಾಟ ಎದುರಿಸಿ : ಸರ್ಕಾರಕ್ಕೆ ಚನ್ನಬಸವಾನಂದ ಶ್ರೀ ಎಚ್ಚರಿಕೆ

Spread the love

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಮಹಾಸಭಾ ಬಸವ ಮಂಟಪದ ಚನ್ನಬಸವಾನಂದ ಶ್ರೀ ವಿರೋಧ ವ್ಯಕ್ತ ಪಡಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಮೊಟ್ಟೆ ವಿತರಣೆ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನಬಸವಾನಂದ ಶ್ರೀಗಳು, ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನ ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು.

ಮೊಟ್ಟೆ ಪೂರ್ಣವಾಗಿ ಮಾಂಸಹಾರವಾಗಿದ್ದು, ಶಾಲಾ ಮಟ್ಟದಿಂದ್ಲೆ ಮಕ್ಕಳಿಗೆ ಈ ಪದ್ಧತಿ ಕಲಿಸಬಾರದು. ಮಕ್ಕಳಿಗೆ ಮೊಟ್ಟೆ ಬದಲಾಗಿ ದ್ವಿಗಳ ಧಾನ್ಯಗಳನ್ನ ನೀಡಬೇಕು. ಇನ್ನು ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ರೆ, ಬಸವ ಪೀಠದಿಂದ ಹೋರಾಟದ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಉಡುಪಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಪ್ರತಿಕ್ರಿಸಿದ್ದು, ‘ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ಮುಂದುವರೆಯಲಿದೆ. ಈ ಬಗ್ಗೆ ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ’ ಎಂದಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ