ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಮಹಾಸಭಾ ಬಸವ ಮಂಟಪದ ಚನ್ನಬಸವಾನಂದ ಶ್ರೀ ವಿರೋಧ ವ್ಯಕ್ತ ಪಡಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಮೊಟ್ಟೆ ವಿತರಣೆ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನಬಸವಾನಂದ ಶ್ರೀಗಳು, ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನ ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು.
ಮೊಟ್ಟೆ ಪೂರ್ಣವಾಗಿ ಮಾಂಸಹಾರವಾಗಿದ್ದು, ಶಾಲಾ ಮಟ್ಟದಿಂದ್ಲೆ ಮಕ್ಕಳಿಗೆ ಈ ಪದ್ಧತಿ ಕಲಿಸಬಾರದು. ಮಕ್ಕಳಿಗೆ ಮೊಟ್ಟೆ ಬದಲಾಗಿ ದ್ವಿಗಳ ಧಾನ್ಯಗಳನ್ನ ನೀಡಬೇಕು. ಇನ್ನು ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ರೆ, ಬಸವ ಪೀಠದಿಂದ ಹೋರಾಟದ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಈ ಬಗ್ಗೆ ಉಡುಪಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಸಿದ್ದು, ‘ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ಮುಂದುವರೆಯಲಿದೆ. ಈ ಬಗ್ಗೆ ನಮ್ಮ ನಡುವೆ ಯಾವುದೇ ಗೊಂದಲ ಇಲ್ಲ’ ಎಂದಿದ್ದಾರೆ.