Home / ರಾಜಕೀಯ / ಕಿರಿಕ್ ಕೀರ್ತಿ’ ಮೇಲೆ ಹಲ್ಲೆ : ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಕಿರಿಕ್ ಕೀರ್ತಿ’ ಮೇಲೆ ಹಲ್ಲೆ : ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್​ನಲ್ಲಿ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಕೀರ್ತಿ ಮೇಲೆ ವ್ಯಕ್ತಿಯೊಬ್ಬ ಬಿಯರ್​ ಬಾಟಲ್​ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

 

ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರೊಂದಿಗೆ ಹೋಗಿದ್ದರು. ಈ ವೇಳೆ ಅಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಕಿರಿಕ್​ ಕೀರ್ತಿ ಅವರ ಫೋಟೋ ತೆಗೆದಿದ್ದಾರೆ. ನನ್ನ ಪರ್ಮಿಷನ್​ ಇಲ್ಲದೇ ಯಾಕೆ ಫೋಟೋ ತೆಗೆದುಕೊಂಡಿದ್ದೀರ ಎಂದು ಕಿರಿಕ್​ ಕೀರ್ತಿ ಕೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ಆ ವ್ಯಕ್ತಿ ಬಿಯರ್​ ಬಾಟಲ್​ ನಿಂದ ಕಿರಿಕ್​ ಕೀರ್ತಿ ತಲೆಗೆ ಹೊಡೆದಿದ್ದಾನೆ.

ಸದ್ಯ ಗಾಯಗೊಂಡಿರುವ ಕಿರಿಕ್​ ಕೀರ್ತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ