Breaking News

ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು : ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

Spread the love

ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳ ಭದ್ರತಾ ಸಿಬ್ಬಂದಿ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು ಚುನಾವಣೆ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.

ವಿಧಾನಪರಿಷತ್‍ಚುನಾವಣೆಡಿಸೆಂಬರ್ 10 ರಂದುಘೋಷಣೆಯಾಗಿದ್ದು, ಡಿಸೆಂಬರ್ 16 ರವರೆಗೆ ಸದಾಚಾರ ನೀತಿ ಸಂಹಿತೆಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳನ್ನು ಹತ್ತಿರದ ಪೊಲೀಸ್‌ ಠಾಣೆಯಲ್ಲಿ ಜಮಾ ಮಾಡುವಂತೆ ಈಗಾಗಲೇ ಸೂಚಿಸಲಾಗಿತ್ತು.

ಇದರಿಂದ ವಿನಾಯಿತಿಕೋರುವವರು ನಿಗದಿತಅವಧಿಯಲ್ಲಿ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಸಮಿತಿ ಗೆ ಅರ್ಜಿ ಸಲ್ಲಿಸಬಹುದು.

ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಅವರು ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮಿಟಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಇವರಿಗೆ ಆಯುಧ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶ್‍ಕುಮಾರ್‍ ಅವರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ