Breaking News

ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Spread the love

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಇಡೀ ಕನ್ನಡ ಚಿತ್ರರಂಗ ನೊಂದಿತ್ತು. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯಕೊಂಡಿ ಕಳಚಿದೆ.

ನಾಗರಹಾವು ಹಾಗೂ ಶುಭಮಂಗಳ ಸಿನಿಮಾಗಳ ಖ್ಯಾತಿಯ ನಟ, ನಿರ್ದೇಶಕ ಶಿವರಾಂ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆಯಷ್ಟೇ ನಟ ಶಿವರಾಂ ಪಾರ್ಥಿವ ಶರೀರಕ್ಕೆ ತ್ಯಾಗರಾಜನಗರ ನಿವಾಸದಲ್ಲಿ, ಕನ್ನಡ ಚಿತ್ರರಂಗದವರು, ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಕೂಡ 7.30ರ ಸುಮಾರಿಗೆ ಶಿವರಾಂ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗಿತ್ತು. ಬೆಳಗ್ಗೆ 8ರಿಂದ 10.30ರವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ