Breaking News

ಬೆಳಗಾವಿ  ಮಾಜಿ ಶಾಸಕ ರಮೇಶ್ ಕುಡಚಿ ಮತ್ತೆ ಜೆಡಿಎಸ್ ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರಿದ್ದಾರೆ.

Spread the love

ರಾಯಬಾಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬೆಳಗಾವಿ  ಮಾಜಿ ಶಾಸಕ ರಮೇಶ್ ಕುಡಚಿ ಮತ್ತೆ ಜೆಡಿಎಸ್ ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರಿದ್ದಾರೆ.

ಹೌದು, ಭಾನುವಾರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಯಬಾಗದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಬೆಳಗಾವಿ ನಗರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಕುಡಚಿ ಪಕ್ಷಾಂತರ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದರು.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಪ್ರಥಮ ಬಾರಿಗೆ ಬೆಳಗಾವಿ ಉತ್ತರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂಇಎಸ್ ಸೋಲಿಸಿ ರಮೇಶ ಕುಡಚಿ ಸತತ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೂರನೇ ಅವಧಿಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಹತಾಶರಾಗಿ ಜನತಾ ದಳ (ಎಸ್ ) ಸೇರಿದರು. ಆದರೆ ಇದೀಗ ಮತ್ತೆ ಏಕಾಏಕಿ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಸುದ್ದಿಯಾಗಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ