Breaking News

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Spread the love

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಡಿಸೆಂಬರ್10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಈಗ ಈ ಸಭೆ ನಡೆಸಿದ್ದು ಯಾಕೆ ಎನ್ನುವುದು ಎಲ್ಲರ ಕುತೂಹಲಕ್ಕೆ ಈಗ ಕಾರಣವಾಗಿದೆ. ಇನ್ನು ಈ ಗುಪ್ತ್ ಮೀಟಿಂಗ್ ಹಿಂದಿನ ಅಸಲಿಯತ್ತೇನು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಪ್ರತ್ಯೇಕ ಸಭೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವಿಗೆ ಶ್ರಮಿಸುವಂತೆ ಸಿಎಂ ಆಗ್ರಹಿಸಿದ್ದಾರೆ ಎನ್ನಲಾಗಿದೆ.

Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ