Breaking News

ಇಂದು ಮಧ್ಯಾಹ್ನ ಸೇನಾ ಮುಖಂಡ ಬಿಪಿನ್​ ರಾವತ್, ಅವರ ಪತ್ನಿಯ ಅಂತ್ಯಕ್ರಿಯೆ

Spread the love

ನವದೆಹಲಿ: ತಮಿಳುನಾಡಿನ ಕುನೂರು ಬಳಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಸೇನಾ ಮುಖಂಡ ಬಿಪಿನ್​ ರಾವತ್​​​ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅಂತ್ಯಕ್ರಿಯೆಯು ಇಂದು ನವದೆಹಲಿಯ ಕಂಟೋನ್ಮೆಂಟ್ ಪ್ರದೇಶದ ಬ್ರಾರ್ ಸ್ಕ್ವೇರ್ ರುದ್ರಭೂಮಿಯಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ಜನರಲ್ ರಾವತ್ ಅವರ ಪಾರ್ಥಿವ ಶರೀರವನ್ನು ನವದೆಹಲಿಯ ಕಾಮರಾಜ್ ಮಾರ್ಗದ ನಂ. 3ರಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ನಮನಕ್ಕೆ ಇಡಲಾಗುವುದು. ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಗಣ್ಯರು ಮತ್ತು ನಾಗರಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ಬಳಿಕ ಸೇನಾ ಸಿಬ್ಬಂದಿ ಅಂತಿಮ ಗೌರವ ಸಲ್ಲಿಸಲಿದ್ದಾರೆ.

ತದನಂತರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಜನರಲ್ ಬಿಪಿನ್ ರಾವತ್ ಅವರ ನಿವಾಸದಿಂದ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಬ್ರಾರ್ ಸ್ಕ್ವೇರ್ ರುದ್ರಭೂಮಿಯತ್ತ ತೆರಳಲಿದೆ.

ಹೆಲಿಕಾಪ್ಟರ್​​​​ ಅಪಘಾತದಲ್ಲಿ ಸಾವನ್ನಪ್ಪಿದ 13 ಮಂದಿಯ ಪಾರ್ಥಿವ ಶರೀರಗಳನ್ನು ನಿನ್ನೆ ದೆಹಲಿಯ ಪಾಲಂ ಏರ್​ಬೇಸ್​ಗೆ ತರಲಾಗಿತ್ತು. ಪಾಲಂ ಏರ್​​ಬೇಸ್​​​ನಲ್ಲಿ ಪಾರ್ಥಿವ ಶರೀರಗಳಿಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿ, ಅಂತಿಮ ದರ್ಶನ ಪಡೆದಿದ್ದರು. ಇದೇ ವೇಳೆ ವೀರ ಪುತ್ರರ ಕುಟುಂಬಸ್ಥರಿಗೆ ಮೋದಿ ಸಾಂತ್ವನ ಹೇಳಿದ್ದರು.


Spread the love

About Laxminews 24x7

Check Also

ಬೆಳಗಾವಿ: ಗರ್ಭಿಣಿ ಪತ್ನಿಯನ್ನು ಕಾರಿನಲ್ಲೇ ಕೊಂದು ಕಥೆ ಕಟ್ಟಿದ ವಕೀಲ ಪತಿ ಸೇರಿ ಮೂವರ ಬಂಧನ

Spread the loveಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ