Breaking News

ಬೆಳಗಾವಿ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಶಾನೂಲ ತಹಸಿಲ್ದಾರ

Spread the love

ಬೆಳಗಾವಿ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಹುಕ್ಕೇರಿಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅದ್ಯಕ್ಷ ಶಾನೂಲ ತಹಸಿಲ್ದಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಕ್ಕೆರಿಯಲ್ಲಿ ಪರಿಷತ್ ಚುನಾವಣೆಗೆ ನಡೆದ ಮತದಾನದ ವೇಳೆ ಮುಂಜಾನೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಯಾವೊಬ್ಬ ಸದಸ್ಯರೂ ಮತದಾನ ಕೇಂದ್ರದತ್ತ ಸುಳಿಯಲಿಲ್ಲ, ಹುಕ್ಕೇರಿ ತಾಲೂಕಿನ ಗ್ರಾಮ ಪಂಚಾಯತಿಗಳಾದ ಎಲಿಮುನ್ನೋಳ್ಳಿ, ಗುಡಸ, ಅಮ್ಮಣಗಿ, ನೆರಲಿ, ಬಡಕುಂದ್ರಿ ಗ್ರಾಮಗಳಲ್ಲಿ ಮತದಾನ ಕೇಂದ್ರಗಳಲ್ಲಿ ಅಧಿಕಾರಿಗಳು ಮಾತ್ರ ಕಂಡುಬಂದರು. ಕಾಂಗ್ರೆಸ್ ಮತ್ತು ಭಾರತಿಯ ಜನತಾ ಪಕ್ಷದ ಸದಸ್ಯರು ಅಲ್ಲಲ್ಲಿ ಗುಂಪು ಗುಂಪಾಗಿ ಗುಸು ಗುಸು ಮಾತನಾಡುವ ದೃಶ್ಯಗಳು ಕಂಡು ಬಂದವು.

ಈ ಸಂದರ್ಭದಲ್ಲಿ ಮತನಾಡಿದ ಹುಕ್ಕೇರಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅದ್ಯಕ್ಷ ಶಾನೂಲ ತಹಸಿಲ್ದಾರ, ಕಳೆದ 10 ದಿನಗಳಿಂದ ಕ್ಷೇತ್ರದ ಸದಸ್ಯರಿಗೆ ಭೇಟಿ ಮಾಡಿ ಅವರ ವಯಕ್ತಿಕ ಅಭಿಪ್ರಾಯಗಳನ್ನು ಪಡೆದಿದ್ದೇವೆ. ಹಲವಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಗಳನ್ನು ಮೆಚ್ಚಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೋಳಿಯವರಗೆ ಮತ ನೀಡಲು ನಿರ್ಧರಿಸಿದ್ದಾರೆ. ಕಾರಣ ಶಾಸಕ ಸತೀಶ ಜಾರಕಿಹೋಳಿ ಮತ್ತು ಮಾಜಿ ಸಚಿವ ಎ ಬಿ ಪಾಟೀಲ ಇವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಗಲಿರಳು ಶ್ರಮ ವಹಿಸಿದ್ದಾರೆ. ಹಾಗಾಗಿ ಚನ್ನರಾಜ ಹಟ್ಟಿಹೊಳಿಯವರ ಗೆಲುವು ನಿಶ್ಚೀತವಾಗಿದೆ ಎಂದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಜು ಶಿದ್ನಾಳ ಮಾತನಾಡಿ, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಸದಸ್ಯರು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಯವರ ಗೆಲುವಿಗೆ ಒಲವು ತೋರಿಸಿದ್ದಾರೆ, ಶಾಸಕಿ ಲಕ್ಷ್ಮಿ ಹೇಬ್ಬಾಳಕರ್ ಒಳ್ಳೆಯ ಕಾರ್ಯ ಮಾಡಿದ್ದಾರೆ. ಸತೀಶ ಜಾರಕಿಹೋಳಿಯವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್
ಈ ಸಂದರ್ಭದಲ್ಲಿ ಬೆಳಗಾವಿಯಿಂದ ವಿಕ್ಷಕರಾಗಿ ವಿನೋದ ನಾಯಿಕ, ರಾಜಶ್ರೀ ನಾಯಿಕ, ಪ್ರಕಾಶ ನಾಯಿಕ, ಭಾರತಿ ಧಾನವಾಡೆ ಭೇಟಿ ನೀಡಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ