Breaking News

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯ ಸಾಧಿಸುತ್ತಾರೆ. ಹಾನಗಲ್ ಉಪ ಚುನಾವಣೆಯ ಫಲಿತಾಂಶದಂತೆ ಈ ಫಲಿತಾಂಶವೂ ಬರಲಿದೆ

Spread the love

ಬೆಳಗಾವಿ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯ ಸಾಧಿಸುತ್ತಾರೆ. ಹಾನಗಲ್ ಉಪ ಚುನಾವಣೆಯ ಫಲಿತಾಂಶದಂತೆ ಈ ಫಲಿತಾಂಶವೂ ಬರಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತ ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರ ಒಗ್ಗಟ್ಟನ್ನು ನೀವೇ ನೋಡುತ್ತಿದ್ದೀರಿ. ಜಿಲ್ಲೆಯ 14 ತಾಲೂಕುಗಳಲ್ಲಿ ನಮ್ಮ ಕಾಂಗ್ರೆಸ್ ಮತದಾರರಿದ್ದಾರೆ. ನಮ್ಮ ಬೆಂಬಲಿಗರ ಸಾಕಷ್ಟು ಒಳ್ಳೆಯ ಸಹಕಾರವಿದೆ. ಹಾಗಾಗಿ ಮೊದಲ ಸುತ್ತಿನಲ್ಲಿಯೇ ಗೆಲ್ಲುವ ನಿರೀಕ್ಷೆ ಇದೆ ಎಂದರು.

ಇನ್ನು ಬೆಳಗಾವಿ ಸಿಎಂ ಬಸವರಾಜ ಬೊಮ್ಮಾಯಿ ಬಂದು ಹೋದ ಮೇಲೆ ಮತದಾರರ ಮೇಲೆ ಪ್ರಭಾವ ಉಂಟಾದ ಕುರಿತು ಮಾತನಾಡಿದ ಅವರು, ಬೆಳಗಾವಿ ಸಿಎಂ ಬಂದಂತೆ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರವರೂ ಕೂಡ ಬಂದಿದ್ದಾರೆ ಆದರೆ ಮತದಾರರ ಮೇಲೆ ಯಾರು ಪ್ರಭಾವ ಬೀರುತ್ತಾರೆ ಎಂಬುದು ಬಹಳ ಮುಖ್ಯವಾಗುತ್ತದೆ. ಇನ್ನು ಹಾನಗಲ್ ಚುನಾವಣೆಯಂತೆ ಈ ಬಾರಿಯ ಚುನಾವಣೆಯ ಫಲಿತಾಂಶ ನೋಡಲು ಸಿಗುತ್ತದೆ ಎಂದರು. ಇನ್ನು ಈಗಾಗಲೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು 14ರಂದು ಗೆಲುವು ಯಾರದ್ದು ಎಂದು ತಿಳಿಯಲಿದೆ.

Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ