Breaking News

ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರ ಲಘು ಲಾಠಿ ಚಾರ್ಜ್

Spread the love

ಬೆಳಗಾವಿ: ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕುದುರೆ ರೇಸ್​ ಅನ್ನು ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ತಡೆದು ರೇಸ್ ಆಯೋಜನೆ ಮಾಡಲಾಗಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್​ ಆಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಜನರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ