Breaking News

ಕ್ರಿಸ್​ಮಸ್​, ಹೊಸ ವರ್ಷ ಅದ್ದೂರಿಯಾಗಿ ಆಚರಿಸಲು ಈ ಬಾರಿಯೂ ಅವಕಾಶವಿಲ್ಲ -ಗೌರವ್ ಗುಪ್ತಾ

Spread the love

ಬೆಂಗಳೂರು: ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಆಚರಣೆಗೆ ಅವಕಾಶ ಕೊಡುವುದು ಬೇಡವೋ ಎಂಬುದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ