Breaking News

ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ? ಸಿ.ಎಂ.ಇಬ್ರಾಹಿಂ

Spread the love

ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮತಾಂತರ ನಿಷೇಧ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿ.ಎಂ.ಇಬ್ರಾಹಿA ಮತಾಂತರವನ್ನು ಯಾರೂ ಬಲವಂತವಾಗಿ ಮಾಡಬಾರದು. ಸ್ವಯಿಚ್ಚೆಯಿಂದ ಬೇಕಾದರೆ ಮತಾಂತರವಾಗಲಿ. ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು. ಆಗ ನಾವೇನಾದರೂ ಮಾತಾಡಿದ್ದೇವಾ..? ರಿಜ್ವಿ ಹಿಂದೂ ಆದ, ನಾವು ಏನಾದರೂ ಹೇಳಿದ್ವಾ..? ಮತಾಂತರ ಅವರವರ ಇಚ್ಛೆ. ಅದಕ್ಕಾಗಿ ಒಂದು ಮಸೂದೆ ತರುವ ನಾಟಕ ಎಲ್ಲ ಯಾಕೆ ಎಂದು ಪ್ರಶ್ನಿಸಿದರು.

ಮತಾಂತರ ನಿಷೇಧ ಮಸೂದೆಯಲ್ಲಿ ಲವ್ ಜಿಹಾದ್ ಸೇರ್ಪಡೆ ವಿಚಾರಕ್ಕೆ ಮಾತನಾಡಿದ ಸಿಎಂ ಇಬ್ರಾಹಿಂ ಯಾವುದ್ರೀ ಲವ್, ಯಾವುದ್ರೀ ಜಿಹಾದ್..? ಮದುವೆಯಾಗೋರು ಲವ್ ಇಲ್ದೇನೇ ಮದುವೆ ಆಗ್ತಾರಾ..? ಲವ್ ಇರೋದ್ರಿಂದಾನೇ ಮದುವೆ ಆಗೋದು. ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ..? ಎಂದರು.

ಗೂಳಿಹಟ್ಟಿ ಶೇಖರ್ ತಾಯಿ ಮತಾಂತರ ಆಗಿದ್ದ ಬಗ್ಗೆ ಪ್ರತಿಕ್ರಯಿಸಿದ ಸಿಎಂ ಇಬ್ರಾಹಿಂ ಅಂತಹ ಕೇಸ್ ಇದ್ರೆ ಕ್ರಮ ತಗೊಳ್ಳಲಿ. ಅವರ ತಾಯಿ ದೂರು ಕೊಟ್ರೆ ತನಿಖೆ ಮಾಡಲಿ. ಯಾರು ಬೇಡ ಅಂತಾರೆ..? ದೇಶದಲ್ಲಿ ಸಾಕಷ್ಟು ಸಮಸ್ಯೆ ಇದೆ. ಊಟದ ಸಮಸ್ಯೆ, ಕೋವಿಡ್ ಸಮಸ್ಯೆ ಇದೆ. ಹುಚ್ಮುಂಡೆ ಮದುವೇಲಿ ವಾಲಗದೋರು ಬಡಿದಿದ್ರು ಅನ್ನೋ ಹಾಗಾಯ್ತು ಈ ಬಿಜೆಪಿ ಸರ್ಕಾರ ಹೇಳುವುದು. ತಿನ್ನೋಕ್ಕೆ ಅನ್ನ ಇಲ್ಲ, ನಿರುದ್ಯೋಗ ಸಮಸ್ಯೆ ಇದೆ, ರೈತರ ಸಮಸ್ಯೆ ಇದೆ. ಈ ಕುರಿತು ಸರ್ಕಾರ ಮಾತಾಡಬೇಕು. ಮತಾಂತರ ಸರ್ಕಾರದ ಸಮಸ್ಯೆ ಅಲ್ಲ ಎಂದು ಕಿಡಿಕಾರಿದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ