Breaking News

ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ : ಮಾಜಿ ಸಚಿವ ಹೆಚ್.ಆಂಜನೇಯ

Spread the love

ಬಾಗಲಕೋಟೆ : ಮತಾಂತರ ಅದು ವ್ಯಕ್ತಿಯ ಅಭಿವ್ಯಕ್ತಿತ್ವ ಸ್ವಾತಂತ್ರ್ಯವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನೀಗ ಹಿಂದೂ ಧರ್ಮದಲ್ಲಿ ಇದ್ದೇನೆ.

ರಾಮ ರಾಮ ಅಂತಾರೆ ರಾಮನೇನು ಇವರಪ್ಪನ ಮನೆಯ ಸ್ವತ್ತಲ್ಲ. ರಾಮನಿಗೆ ಅತಿ ಹತ್ತಿರದವನು ಆಂಜನೇಯ, ಆಂಜನೇಯ ಇಲ್ಲದೆ ರಾಮನಿಲ್ಲ. ರಾಮನಿಲ್ಲದ ಆಂಜನೇಯ ಇಲ್ಲ ಎಂದು ಟಾಂಗ್‌ ನೀಡಿದರು.

ನನ್ನ ಹೆಸರು ನಮ್ಮವ್ವ ಆಂಜನೇಯ ಅಂತ್ಹೇಳಿ ಇಟ್ಟಿದ್ದಾಳೆ. ನಾನು ಹಿಂದೂಧರ್ಮದಲ್ಲಿ ಇದ್ದೇನೆ, ಕಾಂಗ್ರೆಸ್‌ನಲ್ಲಿ ಇದ್ದೇನೆ. ಕೆಲವರು ಒಂದು ಪಾರ್ಟಿಯಲ್ಲಿ ಇದ್ದುಕೊಂಡು ಹಿಂದುಗಳನ್ನು ಖರೀದಿ ಮಾಡಿದ್ದೇವೆ ಎನ್ನುವ ರೀತಿಯಲ್ಲಿದ್ದಾರೆ. ಯಾವ ಧರ್ಮದಲ್ಲಿ ಇರಬೇಕು ಅನ್ನೋದು ನನಗೆ ಬಿಟ್ಟದ್ದು.

ವ್ಯಕ್ತಿಗೆ ಅವನಿಗೆ ಬೇಕಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದೆ. ಬಲವಂತವಾಗಿ ಬೇಕಾದಷ್ಟು ಕಾಯ್ದೆಗಳನ್ನು ಮಾಡಿ ಹಾಕಿದ್ದಾರೆ. ಇವೆಲ್ಲ ಜನವಿರೋಧಿ ಕಾಯ್ದೆಗಳು, ನಾವು ಬಂದ ಮೇಲೆ ಅವುಗಳನ್ನೆಲ್ಲ ಸಾಯಿಸಿಬಿಡ್ತೇವೆ. ಜನಾಭಿಪ್ರಾಯಕ್ಕೆ ಮನ್ನಣೆ ಕೊಡುತ್ತೇವೆ ಎಂದರು.

ಕಾಂಗ್ರೆಸ್ಸಿಗರು ಸೋನಿಯಾಗೆ ಹೆದರಿ ಮತಾಂತರ ಕಾಯ್ದೆ ವಿರೋಧಿಸುತ್ತಿದ್ದಾರೆನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವನ್ಯಾವುನೋ ಮುತಾಲಿಕ್ ಬಿಡ್ರಿ.. ಪ್ರಧಾನಿ ಹುದ್ದೆ ನಿರಾಕರಿಸಿ ಆರ್ಥಿಕ ತಜ್ಞ ಮನಮೋಹನ್​ ಸಿಂಗ್‌ರನ್ನ ಪ್ರಧಾನಿ ಮಾಡಿದ ತ್ಯಾಗ ಮಹಿಳೆ ಅವರು. ಭಾರತದ ಹೆಸರನ್ನು ಇಡೀ ಪ್ರಪಂಚಕ್ಕೆ ಎತ್ತಿ ಹಿಡಿದು ಕೀರ್ತಿ ತಂದಿದ್ದಾರೆ.

ಅಂತಹ ಮಹಿಳೆಯನ್ನ ಟೀಕಿಸುವ ಯೋಗ್ಯತೆ, ನೈತಿಕತೆ ಮುತಾಲಿಕ್‌ಗೆ ಇಲ್ಲ. ಸೋನಿಯಾ ಗಾಂಧಿ ಈ ದೇಶದ ಆದರ್ಶ ಮಹಿಳೆ. ಅವರನ್ನು ಓಲೈಸಿ ಹೇಳುವಂತಹದ್ದೇನಿಲ್ಲ ಎಂದು ತಿರುಗೇಟು‌ ನೀಡಿದರು.

ದೇಶದಲ್ಲಿ ಜನರು ವಿರೋಧ ಮಾಡುವ ಕಾಯ್ದೆ ಜಾರಿಗೆ ತಂದ್ರು ನಾವು ವಿರೋಧಿಸುತ್ತೇವೆ. ಅವರಿವರನ್ನು ಓಲೈಸೋರು ನಾವಲ್ಲ. ಸೋನಿಯಾಗಾಂಧಿ ಎಲ್ಲ ದೇವರನ್ನು ಆರಾಧಿಸಿ ಸರ್ವಧರ್ಮಿಯ ನಾಯಕಿಯಾಗಿದ್ದಾರೆ. ವಿದೇಶದಿಂದ ಬಂದು ಅತ್ತೆ ಕಳೆದುಕೊಂಡಳು, ಗಂಡನನ್ನ ಕಳೆದುಕೊಂಡು ವಿಧವೆ ಆದಳು.

ಹಾಗಿದ್ದರೂ ಪ್ಯಾಕಪ್ ಮಾಡಿಕೊಂಡು ಹೋಗಲಿಲ್ಲ. ಎಲ್ಲವನ್ನು ಬಿಟ್ಟು ಇಲ್ಲಿಯೇ ಉಳಿದರು. ಇಂತವರನ್ನು ಟೀಕೆ ಮಾಡೋರಿಗೆ ಯಾವುದೇ ಜ್ಞಾನ ಇಲ್ಲ ಎಂದರು. ಹಿಂದೂಧರ್ಮ ಪ್ರಚಾರ ಮಾಡಿ ಮನಸ್ಸು ಪರಿವರ್ತನೆ ಮಾಡಿ ನಮ್ಮ ಧರ್ಮದಲ್ಲೇ ಉಳಿಯುವಂತೆ ಮಾಡಲಿ ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಆಹಾರ ಆಯ್ಕೆ ಅವರ ಇಷ್ಟಕ್ಕೆ ಬಿಟ್ಟ ವಿಚಾರ. ವೀಕ್ ಇದ್ದ ಮಕ್ಕಳಿಗೆ ಮೊಟ್ಟೆ ತಿನ್ನುವಂತೆ ಡಾಕ್ಟರೇ ಸಲಹೆ ಕೊಡ್ತಾರೆ. ಅದನ್ನ ಸ್ವಾಮೀಜಿಗಳು ವಿರೋಧ ಮಾಡೋದು ಸರಿಯಲ್ಲ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ